ಸುದ್ದಿಗಳು

ಜಾತ್ಯಾತೀತ ತತ್ವದಿಂದ ದೇಶ ಸುಭದ್ರ – ಪ್ರೊ.ಕೆ.ಈ.ರಾಧಾಕೃಷ್ಣ
ಜಾತ್ಯಾತೀತ ತತ್ವದಿಂದ ದೇಶ ಸುಭದ್ರ - ಪ್ರೊ.ಕೆ.ಈ.ರಾಧಾಕೃಷ್ಣ

ಮಲ್ಲಾಡಿಹಳ್ಳಿ 10-08-2022: ವಿದ್ಯಾರ್ಥಿ ಜೀವನದಿಂದಲೇ ಜಾತ್ಯಾತೀತ ತತ್ವವನ್ನು ಪಾಲಿಸಿದಾಗ

ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ
ವಿದ್ಯಾರ್ಥಿಗಳಿಗೆ ಏಕಾಗ್ರತೆ ಅತ್ಯವಶ್ಯ-ಬ್ರಹ್ಮನಿಷ್ಠಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಹಂತದಲ್ಲಿ ಏಕಾಗ್ರತೆ ಅತ್ಯವಶ್ಯ ಎಂದು ಚಿತ್ರದುರ್ಗ

Follow Us

ಶೇ 100 ಫಲಿತಾಂಶ ಪಡೆದ ಮಲ್ಲಾಡಿಹಳ್ಳಿ ಬಿ.ಇಡಿ ಕಾಲೇಜು

ಶೇ 100 ಫಲಿತಾಂಶ ಪಡೆದ ಮಲ್ಲಾಡಿಹಳ್ಳಿ ಬಿ.ಇಡಿ ಕಾಲೇಜು

ಗುರುವಾರ, ನವೆಂಬರ 9th, 2017

ಮಲ್ಲಾಡಿಹಳ್ಳಿ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬರುವ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯ ಪ್ರತಿವರ್ಷದಂತೆ ಈ ವರ್ಷವೂ ಶೇ.100 ಫಲಿತಾಂಶ ಪಡೆದು ಉತ್ತಮ ಶಿಕ್ಷಣ ಸಂಸ್ಥೆ ಎಂಬ ಖ್ಯಾತಿಯನ್ನು ಉಳಿಸಿಕೊಂಡಿದೆ ಎಂದು ಪ್ರಾಚಾರ್ಯ ಡಾ.ಜಿ.ಯು.ನಾಗರಾಜ್ ಹೇಳಿದರು. 3ನೇ ಸೆಮಿಸ್ಟರ್ ಪರೀಕ್ಷೆಗೆ ಹಾಜರಾದ ಎಲ್ಲ ವಿದ್ಯಾರ್ಥಿಗಳು ಪಾಸಾಗಿದ್ದು 516 ಅಂಕದೊಂದಿಗೆ ಶೇ.86 ಗಳಿಸಿದ ಫಿರ್ದೋಸರಾ ಖಾನಂ ಪ್ರಥಮ ಸ್ಥಾನ ಪಡೆದರು. 508 ಅಂಕ ಗಳಿಸಿದ ತೋಹಿದಾ ಖಾನಂ ದ್ವಿತೀಯ ಸ್ಥಾನ, 504 ಅಂಕಗಳಿಸಿದ ಕವಿತಾ.ಆರ್. ತೃತೀಯ ಸ್ಥಾನ […]

ಮಾತಿಗಿಂತ ಮೌನ ಹೆಚ್ಚು ಪರಿಣಾಮಕಾರಿ-ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ

ಮಾತಿಗಿಂತ ಮೌನ ಹೆಚ್ಚು ಪರಿಣಾಮಕಾರಿ-ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ

ಮಂಗಳವಾರ, ನವೆಂಬರ 7th, 2017

ಮಲ್ಲಾಡಿಹಳ್ಳಿ ಮಾತಿಗಿಂತ ಮೌನ ಹೆಚ್ಚು ಪರಿಣಾಮಕಾರಿಯಾಗುತ್ತದೆ ಮತ್ತು ಅದರ ಜೊತೆಗೆ ಹಲವಾರು ಅರ್ಥಗಳನ್ನು ತಂದುಕೊಟ್ಟು ವ್ಯಕ್ತಿಯ ಗೌರವವನ್ನು ಹೆಚ್ಚಿಸುತ್ತದೆ ಎಂದು ಅನಾಥಸೇವಾಶ್ರಮ ವಿಶ್ವಸ್ತ, ಎಸ್.ಜೆ.ಎಂ.ವಿದ್ಯಾಪೀಠದ ಕಾರ್ಯ ನಿರ್ವಾಹಕ ನಿರ್ದೇಶಕ ಮತ್ತು ಆರ್ಥಿಕ ತಜ್ಞ ಡಾ.ಜಿ.ಎನ್.ಮಲ್ಲಿಕಾರ್ಜುನಪ್ಪ ನುಡಿದರು. ಅವರು ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮದ ಸಂಸ್ಥಾಪಕ ಅಧ್ಯಕ್ಷ ಪೂಜ್ಯ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಸಂಸ್ಥಾಪಕ ಕಾರ್ಯದರ್ಶಿ ಪೂಜ್ಯ ಶ್ರೀ ಸೂರುದಾಸ್‍ಜೀ ಸಂಸ್ಥರಣೆಯ ಅಂಗವಾಗಿ ಏರ್ಪಡಿಸಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಪ್ರಸ್ತುತ ಸಮಾಜದಲ್ಲಿ ಮಾತುಗಳಿಗೆ ಹೆಚ್ಚು ಗಮನಹರಿಸುತ್ತೇವೆ ಆದರೆ ಈ ಎಲ್ಲದಕ್ಕೂ […]

ಬದುಕನ್ನು ಅರ್ಥೈಸಿಕೊಂಡು ಅನುಭವಿಸಿ-ಪ್ರೊ.ಕೆ.ಎಸ್.ಗಂಗಾಧರ್

ಬದುಕನ್ನು ಅರ್ಥೈಸಿಕೊಂಡು ಅನುಭವಿಸಿ-ಪ್ರೊ.ಕೆ.ಎಸ್.ಗಂಗಾಧರ್

ಶನಿವಾರ, ಅಕ್ತೂಬರ 28th, 2017

ಮಲ್ಲಾಡಿಹಳ್ಳಿ ಬದುಕು ಸಂಕೀರ್ಣವಾಗಿದ್ದು ಅರ್ಥೈಸಿಕೊಂಡು ಅನುಭವಿಸಿದಾಗ ಮಾತ್ರ ಮನುಷ್ಯ ಪರಿಪೂರ್ಣನಾಗುತ್ತಾನೆ ಎಂದು ದಾವಣಗೆರೆ ಎಸ್.ಎಂ.ಕೃಷ್ಣ ಬಿ.ಇಡಿ ಕಾಲೇಜಿನ ಪ್ರಾಚಾರ್ಯ ಪ್ರೊ.ಗಂಗಾಧರ್ ತಿಳಿಸಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಬಿ.ಇಡಿ ಕಾಲೇಜಿನ 2017ನೇ ಸಾಲಿನ ಪೌರತ್ವ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಾ ಇಂದಿನ ಸಮಾಜಕ್ಕೆ ಪ್ರಜ್ಞಾವಂತ, ಉತ್ತಮ ಸಂಸ್ಕಾರ ಹೊಂದಿದ ಶಿಕ್ಷಕರು ಅಗತ್ಯವಿದ್ದು ಇಂತಹ ಶಿಕ್ಷಕರನ್ನು ತಯಾರು ಮಾಡಲು ಶಿಕ್ಷಕರ ತರಬೇತಿ ಸಂಸ್ಥೆಗಳು ನಿರಂತರವಾಗಿ ಶ್ರಮಿಸುತ್ತಿವೆ ಶಿಕ್ಷಣಾರ್ಥಿಗಳು ಏನೇ ಕಲಿತರು ಗುರುಮುಖೇನ ಕಲಿತು ಅವುಗಳನ್ನು ಆಚರಣೆಯಲ್ಲಿ ತಂದಾಗ […]

ಮಲ್ಲಾಡಿಹಳ್ಳಿ ಸ್ವತಂತ್ರ ವಿಜ್ಞಾನ ಕಾಲೇಜು ತಾಲ್ಲೂಕಿಗೆ ಸಮಗ್ರ ಪ್ರಶಸ್ತಿ

ಮಲ್ಲಾಡಿಹಳ್ಳಿ ಸ್ವತಂತ್ರ ವಿಜ್ಞಾನ ಕಾಲೇಜು ತಾಲ್ಲೂಕಿಗೆ ಸಮಗ್ರ ಪ್ರಶಸ್ತಿ

ಗುರುವಾರ, ಸೆಪ್ಟೆಂಬರ 7th, 2017

ಮಲ್ಲಾಡಿಹಳ್ಳಿ ಸ್ವತಂತ್ರ ವಿಜ್ಞಾನ ಕಾಲೇಜು ತಾಲ್ಲೂಕಿಗೆ ಸಮಗ್ರ ಪ್ರಶಸ್ತಿಮಲ್ಲಾಡಿಹಳ್ಳಿ  ಹೊಳಲ್ಕೆರೆ ತಾಲ್ಲೂಕಿನ ಮಲ್ಲಾಡಿಹಳ್ಳಿ ಸ್ವತಂತ್ರ ವಿಜ್ಞಾನ ಪದವಿಪೂರ್ವ ಕಾಲೇಜು ತಾಲ್ಲೂಕಿನ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಗಳಿಸಿಕೊಂಡಿದ್ದು, ಉತ್ತಮ ಸಂಸ್ಕಾರ, ಉತ್ತಮ ಶಿಕ್ಷಣಕ್ಕೆ ಹೆಸರಾದ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶಾಲಾ ಕಾಲೇಜುಗಳು ಉತ್ತಮ ಯಶಸ್ಸನ್ನು ಗಳಿಸುತ್ತಿರುವುದು  ಶ್ಲಾಘನೀಯ ಎಂದು ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ತಿಳಿಸಿದರು. ಬಾಲಕರ ವಿಭಾಗದಲ್ಲಿ ಖೋಖೋ, ಷಟಲ್ ಬ್ಯಾಂಡ್ಮಿಂಟನ್, ಚೆಸ್, ಫುಟ್‍ಬಾಲ್ ಪ್ರಥಮ ಸ್ಥಾನ ಪಡೆದಿದ್ದು, ಕಬಡ್ಡಿ ದ್ವಿತೀಯ ಸ್ಥಾನ ಗಳಿಸಿಕೊಂಡಿದೆ. ಉದ್ದಜಿಗಿತ, ಎತ್ತರ […]

ಗಾಂಧೀಜಿಯವರ ತತ್ವಾದರ್ಶಗಳನ್ನು ರೂಢಿಸಿಕೊಳ್ಳಿ- ಡಾ.ಶಿ.ಮು.ಶ

ಗಾಂಧೀಜಿಯವರ ತತ್ವಾದರ್ಶಗಳನ್ನು ರೂಢಿಸಿಕೊಳ್ಳಿ- ಡಾ.ಶಿ.ಮು.ಶ

ಬುಧವಾರ, ಆಗಸ್ತು 16th, 2017

ಮಲ್ಲಾಡಿಹಳ್ಳಿ ಗಾಂಧೀಜಿಯವರ ತತ್ವಾದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ಮಲ್ಲಾಡಿಹಳ್ಳಿಯ ಎಲ್ಲ ಶಾಲಾ ಕಾಲೇಜುಗಳ ವತಿಯಿಂದ ಏರ್ಪಡಿಸಲಾಗಿದ್ದ ಸ್ವಾತಂತ್ರ್ಯೋತ್ಸವ ದಿನಾಚರಣೆಯಲ್ಲಿ ಪೂಜ್ಯ ಶ್ರೀ ಡಾ.ಶಿವಮೂರ್ತಿ ಮುರುಘಾ ಶರಣರು ತಮ್ಮ ಸಂದೇಶದಲ್ಲಿ ತಿಳಿಸಿದರು. ಇಂದಿನ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಷಾದನೀಯ ಬುದ್ಧನಂತೆ ಕಟ್ಟೆಯ ಮೇಲೆ ಧ್ಯಾನಾಸಕ್ತನಾಗಿ ಯೋಚಿಸುವ ಅಗತ್ಯತೆ ಇಂದು ನಮ್ಮ ಯುವಕರಿಗೆ ಬೇಕಾಗಿದೆ ಎಂದರು. ನಾವೆಲ್ಲರೂ ಸೇರಿ ಗಾಂಧೀಜಿಯವರ ಕನಸುಗಳನ್ನು ಪ್ರೋತ್ಸಾಹಿಸುವ ದಿಕ್ಕಿನಲ್ಲಿ ಆರೋಗ್ಯಯುತ, ಶಾಂತಿಯುತ ಸಮಾಜವನ್ನು ಕಟ್ಟಬೇಕು ಎಂದರು. ಒಟ್ಟಾರೆಯಾಗಿ ಸಂಘಶಕ್ತಿ ರಾಷ್ಟ್ರಶಕ್ತಿಯಾಗಿ ರೂಪುಗೊಳ್ಳುತ್ತದೆ ಎಂದರು. ಕಾರ್ಯಕ್ರಮದಲ್ಲಿ ವಯೋನಿವೃತ್ತಿ […]

ಆಗಸ್ಟ್ 1 ರಿಂದ 3ರ ವರೆಗೆ ಮಲ್ಲಾಡಿಹಳ್ಳಿ ಸ್ವಾಮೀಜಿದ್ವಯರ ಪುಣ್ಯಾರಾಧನೆ

ಆಗಸ್ಟ್ 1 ರಿಂದ 3ರ ವರೆಗೆ ಮಲ್ಲಾಡಿಹಳ್ಳಿ ಸ್ವಾಮೀಜಿದ್ವಯರ ಪುಣ್ಯಾರಾಧನೆ

ಗುರುವಾರ, ಜುಲಾಯಿ 27th, 2017

ಮಲ್ಲಾಡಿಹಳ್ಳಿ ಯೋಗ, ಆಯುರ್ವೇದ ಮತ್ತು ಶಿಕ್ಷಣಕ್ಕೆ ಪ್ರಸಿದ್ಧವಾದ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಸ್ಥಾಪಕರಾದ ವ್ಯಾಯಾಮ ಮೇಷ್ಟ್ರು, ಅಭಿನವ ಧನ್ವಂತರಿ ತಿರುಕನಾಮಾಂಕಿತ ಪೂಜ್ಯ ಶ್ರೀ ರಾಘವೇಂದ್ರ ಸ್ವಾಮೀಜಿ ಮತ್ತು ಅವರ ಜೊತೆಗೂಡಿ ಬಡವರ, ದೀನದಲಿತರ ಹಾಗೂ ಹಿಂದುಳಿದ ವರ್ಗದವರ ಏಳ್ಗೆಗಾಗಿ ಉತ್ತಮ ಸಂಸ್ಥೆಯನ್ನು ಕಟ್ಟಿ ಬೆಳೆಸಲು ಕಾರಣರಾದ ಪೂಜ್ಯ ಶ್ರೀ ಸೂರುದಾಸ್‍ಜೀ ಸ್ವಾಮೀಜಿದ್ವಯರ ಪುಣ್ಯಾರಾಧನೆಯು ಬರುವ ಆಗಸ್ಟ್ 1 ರಿಂದ 3ರವರೆಗೆ ನಡೆಯಲಿದೆ ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಹೇಳಿದರು. ಎಲ್ಲ ಶಾಲಾ ಕಾಲೇಜುಗಳ ಮುಖ್ಯಸ್ಥರು ಹಾಗೂ ದೈಹಿಕ ಶಿಕ್ಷಣ […]

ಮಲ್ಲಾಡಿಹಳ್ಳಿ ಗುರುಕುಲದ ಜಿ.ಎಸ್.ಮನೋಹರಿ ತಾಲ್ಲೂಕಿಗೆ ಪ್ರಥಮ

ಮಲ್ಲಾಡಿಹಳ್ಳಿ ಗುರುಕುಲದ ಜಿ.ಎಸ್.ಮನೋಹರಿ ತಾಲ್ಲೂಕಿಗೆ ಪ್ರಥಮ

ಗುರುವಾರ, ಜೂನ್ 29th, 2017

ಮಲ್ಲಾಡಿಹಳ್ಳಿ 2017ನೇ ನವೋದಯ ಶಾಲೆಯ ಆಯ್ಕೆಗಾಗಿ ನಡೆದ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಯಲ್ಲಿ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮ ರಾಘವೇಂದ್ರ ಗುರುಕುಲ ವಿದ್ಯಾಪೀಠದ ವಿದ್ಯಾರ್ಥಿನಿ ಜಿ.ಎಸ್.ಮನೋಹರಿ ಹೊಳಲ್ಕೆರೆ ತಾಲ್ಲೂಕಿಗೆ ಪ್ರಥಮ ಸ್ಥಾನಗಳಿಸಿ ಹಿರಿಯೂರು ತಾಲ್ಲೂಕಿನ ಉಡುವಳ್ಳಿ ನವೋದಯ ಶಾಲೆಗೆ ಆಯ್ಕೆಯಾಗಿರುವುದು ನಮಗೆ ಹೆಮ್ಮೆಯ ವಿಷಯ ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ತಿಳಿಸಿದರು. ಶಿಸ್ತು, ಸಂಸ್ಕಾರ ಹಾಗೂ ಶಿಕ್ಷಣಕ್ಕೆ ಹೆಸರಾದ ಸಂಸ್ಥೆಯಲ್ಲಿ ಪ್ರತಿವರ್ಷವೂ ಈ ಶಾಲೆಯ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುತ್ತಿದ್ದು ಶಾಲೆಯ ಕೀರ್ತಿಯನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಮುಖ್ಯೋಪಾಧ್ಯಾಯರು, ಶಿಕ್ಷಕರು […]

ಯೋಗದಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ-ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ

ಗುರುವಾರ, ಜೂನ್ 22nd, 2017

ಮಲ್ಲಾಡಿಹಳ್ಳಿ ಯೋಗಾಚರಣೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಲಭಿಸುತ್ತದೆ ಎಂದು ಅನಾಥಸೇವಾಶ್ರಮ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಟಿ.ಎಚ್.ಗುಡ್ಡಪ್ಪ ಹೇಳಿದರು. ಅವರು ಮಲ್ಲಾಡಿಹಳ್ಳಿಯಲ್ಲಿ 3ನೇ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸೀನಿಯರ್ ಹಾಗೂ ಜ್ಯೂನಿಯರ್ ಎನ್.ಸಿ.ಸಿ. ಕೆಡೆಟ್‍ಗಳ ಯೋಗ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡುತ್ತಾ ವಿದ್ಯಾರ್ಥಿಗಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಯೋಗ ಅವಶ್ಯವಾಗಿದ್ದು ವಿದ್ಯಾರ್ಥಿಗಳು ದಿನಕ್ಕೆ ಕನಿಷ್ಠ 20 ನಿಮಿಷಗಳಾದರೂ ಯೋಗಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು ಇದರಿಂದ ಆರೋಗ್ಯವಾದ ಜೀವನ ನಡೆಸಬಹುದು ಮುಂದೆ ಆರೋಗ್ಯವಂತ ಸಮಾಜದ ಸೃಷ್ಠಿಯಾಗುತ್ತದೆ ಎಂದರು. ಯೋಗ ತರಬೇತುದಾರ ಸಂತೋಷ್‍ಕುಮಾರ್ […]

ಉತ್ತಮ ಆಲೋಚನೆಯಿಂದ ವ್ಯಕ್ತಿತ್ವ ಶ್ರೇಷ್ಠ - ಡಾ.ಶಿವಮೂರ್ತಿ ಮುರುಘಾ ಶರಣರು

ಉತ್ತಮ ಆಲೋಚನೆಯಿಂದ ವ್ಯಕ್ತಿತ್ವ ಶ್ರೇಷ್ಠ – ಡಾ.ಶಿವಮೂರ್ತಿ ಮುರುಘಾ ಶರಣರು

ಬುಧವಾರ, ಜೂನ್ 21st, 2017

ಮಲ್ಲಾಡಿಹಳ್ಳಿ ಉತ್ತಮ ಆಲೋಚನೆಯಿಂದ ವ್ಯಕ್ತಿತ್ವ ಶ್ರೇಷ್ಠಗೊಳ್ಳುತ್ತದೆ ಎಂದು ಪೂಜ್ಯ ಶ್ರೀ.ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ಅವರು ಹೊಳಲ್ಕೆರೆ ತಾಲ್ಲೂಕಿನ ಪ್ರಸಿದ್ಧ ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದಲ್ಲಿ 3ನೇ ಅಂತರಾಷ್ಟ್ರೀಯ ಯೋಗದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ಯೋಗ ಪದ್ಧತಿಯನ್ನು ಆಚರಿಸುವ ಎಲ್ಲರಿಗೂ ಉತ್ತಮ ಆಲೋಚನೆಗಳು ಲಭ್ಯವಾಗುತ್ತವೆ ತನ್ಮೂಲಕ ವ್ಯಕ್ತಿತ್ವ ಶ್ರೇಷ್ಠಗೊಳ್ಳುತ್ತದೆ ಎಂದರು. ಯೋಗವು ಮನುಷ್ಯನ ಆಂತರಿಕ ವಿಕಾಸಕ್ಕೆ ದಾರಿಮಾಡಿಕೊಡುತ್ತದೆ ಒಳಮನಸ್ಸನ ನೋಡುವುದು ಯೋಗದಿಂದ ಸಾಧ್ಯವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ತೋರಿಸುವುದರ ಮೂಲಕ ಅರಿವನ್ನುಂಟು ಮಾಡಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ತನೀಕಲ್ ಸುಧಾಕರ […]

ಅಭಿನಯದ ಮೂಲಕ ಬೋಧನೆ ಪರಿಣಾಮಕಾರಿ - ಪ್ರೊ.ಟಿ.ಎಚ್.ಕೃಷ್ಣಮೂರ್ತಿ

ಅಭಿನಯದ ಮೂಲಕ ಬೋಧನೆ ಪರಿಣಾಮಕಾರಿ – ಪ್ರೊ.ಟಿ.ಎಚ್.ಕೃಷ್ಣಮೂರ್ತಿ

ಮಂಗಳವಾರ, ಮೇ 16th, 2017

ಮಲ್ಲಾಡಿಹಳ್ಳಿ ಶಿಕ್ಷಕನು ಅಭಿನಯವನ್ನು ಕಲಿತುಕೊಂಡು ಅಭಿನಯಿಸುತ್ತಾ ಬೋಧಿಸಿದಾಗ ಪಠ್ಯ ಹೆಚ್ಚು ಪರಿಣಾಮಕಾರಿಯಾಗುತ್ತದೆ ಎಂದು ಅನಾಥಸೇವಾಶ್ರಮದ ವಿಶೇಷಾಧಿಕಾರಿ ಪ್ರೊ.ಟಿ.ಎಚ್.ಕೃಷ್ಣಮೂರ್ತಿ ಹೇಳಿದರು. ಅವರು ಮಲ್ಲಾಡಿಹಳ್ಳಿ ಅನಾಥಸೇವಾಶ್ರಮದ ಶ್ರೀ ರಾಘವೇಂದ್ರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಏರ್ಪಡಿಸಲಾದ 2 ದಿನದ ಶಿಕ್ಷಣದಲ್ಲಿ ರಂಗಕಲೆ ನಾಟಕ ತರಬೇತಿ ಮತ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಶಿಕ್ಷಣಾರ್ಥಿಗಳನ್ನು ಉದ್ಧೇಶಿಸಿ ಮಾತನಾಡುತ್ತಾ ಯಾವುದೇ ವಿಷಯವನ್ನು ಶಿಕ್ಷಕ ಬೋಧಿಸುವ ಸಮಯದಲ್ಲಿ ಬೋಧನೆಗೆ ನಾಟಕಾಭಿಯವನ್ನು ಸೇರಿಸಿಕೊಂಡು ಬೋಧಿಸಿದಾಗ ಹೆಚ್ಚು ಪರಿಣಾಮಕಾರಿಯಾಗುವುದಲ್ಲದೆ ಯಾವುದೇ ವಿಷಯವನ್ನು ವಿದ್ಯಾರ್ಥಿಗಳಲ್ಲಿ ಅಚ್ಚಳಿಯದೇ ಉಳಿಸಲು ಸಾಧ್ಯವಾಗುತ್ತದೆ ಎಂದರು. ಹಿರಿಯ ಉಪನ್ಯಾಸಕ […]